VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 6, 2010

ರೈತರ ಕೈಗೆ ಕೋಳ, ನೀಚ ಕೃತ್ಯ


ಧಾರವಾಡ, ಜ. 6 : ರೈತ ಮೇಲೆ ಬರೀ ಲಾಠಿ ಬೀಸುತ್ತಿದ್ದ ಯಡಿಯೂರಪ್ಪ ನೇತೃತ್ವದ ಸರಕಾರ ಇದೀಗ ಅನ್ನ ನೀಡುವ ಅನ್ನದಾತ ಕೈಗೆ ಕೋಳ ತೊಡಿಸುವ ಮೂಲಕ ಅನಾಗರಿಕತೆ ಪ್ರದರ್ಶಿಸಿದೆ. ನಗರದ ಕೇಂದ್ರ ಕಾರಾಗೃಹದಲ್ಲಿ ಅಮರಣ ಉಪವಾಸ ಕೈಗೊಂಡು ಅಸ್ವಸ್ಥನಾದ ರೈತನ ಕೈಗೆ ಕೋಳ ತೊಡಿಸಿ ಅವಮಾನ ಮಾಡಿರುವ ಪ್ರಸಂಗ ನಡೆದಿದೆ.

ಉಪವಾಸ ಕುಳಿತು ಅಸ್ವಸ್ಥನಾದ ದಾವಣಗೆರೆಯ ರೈತ ರಾಜೇಸಾಬ್ ಮತ್ತು ಅಪರಾಧಿ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಒಂದೇ ಕೋಳ ಹಾಕಿದ್ದರು. ಈ ಕೋಳ ಭಾರಿ ಕ್ರಿಮಿನಲ್ ಗಳಿಗೆ ತೊಡಿಸುವ ಕೋಳವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಭಾರಿ ಟೀಕೆ, ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಮೂವರು ಪೇದೆಗಳನ್ನು ಅಮಾನತು ಮಾಡಲಾಗಿದೆ.

ಯಡಿಯೂರಪ್ಪ ರೈತರ ಮೇಲೆ ಪ್ರಮಾಣ ವಚನ ಸ್ವೀಕರಿಸುವುದು, ಇನ್ನೊಂದಡೆ ಉಳುವ ಯೋಗಿಯ ನೋಡಲ್ಲೀ ಎಂಬ ಗೀತೆಯನ್ನು ನಾಡಗೀತೆಯನ್ನಾಗಿ ಮಾಡುವುದು, ಬೆನ್ನಲ್ಲೇ ರೈತರ ಮೇಲೆ ಲಾಠಿ ಬೀಸುವುದು, ಬೂಟಿನ ರುಚಿ ತೋರಿಸುವುದು ಈ ವರೆಗೂ ಮಾಮೂಲಾಗಿತ್ತು. ಇದೀಗ ಒಂದೆಜ್ಜೆ ಮುಂದೆ ಹೋಗಿರುವ ಯಡಿಯೂರಪ್ಪ, ಮೂಲಭೂತ ಹಕ್ಕಿಗಾಗಿ, ನ್ಯಾಯಕ್ಕಾಗಿ, ಹೊಟ್ಟೆಪಾಡಿಗಾಗಿ ಹೋರಾಟ ನಡೆಸಿದ ರೈತನ ಕೈಗೆ ಕೋಳ ತೊಡಿಸಿರುವುದು ಅತ್ಯಂತ ಖಂಡನೀಯ ಕೃತ್ಯ. ತಪ್ಪು ಮಾಡದ ರೈತನನ್ನು ಹೀನವಾಗಿ ನಡೆಸಿಕೊಂಡಿದ್ದು ಕ್ಷಮಾರ್ಹವಲ್ಲ. ಪೇದೆಗಳನ್ನು ಅಮಾನತು ಮಾಡುವುದರ ಬದಲು ಜೈಲಿನ ಹಿರಿಯ ಅಧಿಕಾರಿಗಳು, ಎಸ್ಪಿಯಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕಿದೆ.

Source - Thats Kannada

No comments: