
ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಮಸಿ ಬಳಿದ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಎರಡು ಕೋಟಿ ರೂಪಾಯಿ ನಷ್ಟ ಉಂಟಾಗಿದೆ.
ಬೆಂಗಳೂರು: ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಮಸಿ ಬಳಿದ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಎರಡು ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ ವಿವರಿಸಿದರು.
ಘಟನೆ ನಡೆದ ಬಳಿಕ ರಾಜ್ಯದ ವಿವಿಧೆಡೆ ನಡೆದ ಗಲಭೆ ಮತ್ತು ಹಿಂಸಾಚಾರಗಳಲ್ಲಿ ಯಲ್ಲಿ 12 ಬಸ್ಗಳನ್ನು ಸುಟ್ಟು ಹಾಕಲಾಗಿದೆ. 160 ಬಸ್ಗಳನ್ನು ಜಖಂಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂಬಂಧ ಎಲ್ಲ ಕಡೆಯೂ ದೂರು ದಾಖಲು ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.
ಪ್ರಜಾವಾಣಿ ವಾರ್ತೆ
No comments:
Post a Comment