VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Feb 25, 2010

ಸಯೀದ್ ಸೆರೆಗೆ ಆಗ್ರಹ: ಧೈರ್ಯ ಮಾಡಿದ ಭಾರತ (


ಭಾರತ ಮತ್ತು ಪಾಕಿಸ್ತಾನಗಳ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ರಾಷ್ಟ್ರ ರಾಜಧಾನಿಯಲ್ಲಿ ಮುಕ್ತಾಯಗೊಂಡಿದ್ದು, ಮುಂಬೈ ಭಯೋತ್ಪಾದನಾ ದಾಳಿಯ ರೂವಾರಿ ಹಫೀಜ್ ಸಯೀದ್‌ನನ್ನು ಬಂಧಿಸುವಂತೆ ಪಾಕಿಸ್ತಾನಕ್ಕೆ ಕೊನೆಗೂ ಅಧಿಕೃತ ಮಟ್ಟದಲ್ಲಿ ತಾಕೀತು ಮಾಡಿದೆ. ಆ ಮೂಲಕ ಮಾತುಕತೆ ಭಯೋತ್ಪಾದನಾ ವಿಚಾರವನ್ನು ಕೇಂದ್ರೀಕರಿಸಿರುತ್ತದೆ ಎಂಬ ಮಾತನ್ನು ಭಾರತ ಉಳಿಸಿಕೊಂಡಿದೆ.

ಇದಕ್ಕೆ ಸ್ಪಂದಿಸಿರುವ ಪಾಕಿಸ್ತಾನ, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಎಂದಿನಂತೆ ಭರವಸೆ ನೀಡಿದೆಯಾದರೂ, 'ಸಮಗ್ರ ಮಾತುಕತೆ' ಮುಂದುವರಿಸುವಂತೆ ಭಾರತದ ಮೇಲೆ ಒತ್ತಡ ಹೇರಿದೆ.

ಪಾಕಿಸ್ತಾನದಲ್ಲಿನ ಭಯೋತ್ಪಾದನಾ ನೆಲೆಗಳನ್ನು ಧ್ವಂಸಗೊಳಿಸುವುದು ಮತ್ತು ಅವರಿಗೆ ಯಾವುದೇ ರೀತಿಯಲ್ಲಿ ಸಹಕಾರ ಸಿಗದಂತೆ ನೋಡಿಕೊಳ್ಳುವುದು ಸೇರಿದಂತೆ ಭಾರತಕ್ಕೆ ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಈ ಸಂದರ್ಭದಲ್ಲಿ ಭಾರತ ಒತ್ತಡ ಹೇರಿದೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನವು ಬಲೂಚಿಸ್ತಾನದ ಪ್ರಸ್ತಾಪವನ್ನೂ ಮಾಡಿದೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ, ಶರಮ್-ಎಲ್-ಶೇಖ್‌ನಲ್ಲಿ ಮಾತುಕತೆ ಸಂದರ್ಭದಲ್ಲಿ ನಡೆದ ಅಚಾತುರ್ಯದ ಅರಿವಿದ್ದಕ್ಕೋ ಏನೋ, ಉಭಯ ರಾಷ್ಟ್ರಗಳೂ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆಯ ಬಳಿಕ ಜಂಟಿ ಹೇಳಿಕೆ ನೀಡದಿರಲು ಒಪ್ಪಿಕೊಂಡಿವೆ.

ಕಳೆದ ಹದಿನಾಲ್ಕು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಉಭಯ ರಾಷ್ಟ್ರಗಳ ನಡುವಿನ ಸಂಬಂಧಕ್ಕೆ ಇಂದು ಬೆಳಿಗ್ಗೆ 'ಹೈದರಾಬಾದ್ ಹೌಸ್'ನಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಅವರು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಸಲ್ಮಾನ್ ಬಶೀರ್ ಅವರನ್ನು ಸ್ವಾಗತಿಸುವ ಮೂಲಕ ಮರು ಜೀವ ನೀಡಿದರು. ಉಭಯ ರಾಷ್ಟ್ರಗಳ ಸಚಿವಾಲಯಗಳ ಅಗ್ರ ಅಧಿಕಾರಿಯಗಳ ನಿಯೋಗವು ಸಭೆಯಲ್ಲಿ ಪಾಲ್ಗೊಂಡಿತ್ತು.

2008ರ ನವೆಂಬರ್ 26ರಂದು ಭಾರತದ ವಾಣಿಜ್ಯ ರಾಜಧಾನಿ ಮುಂಬೈ ಮೇಲೆ ದಾಳಿ ನಡೆಸಿ 260ಕ್ಕೂ ಹೆಚ್ಚು ಅಮಾಯಕರ ಸಾವಿಗೆ ಕಾರಣವಾದ ಘಟನೆಯ ಹಿಂದೆ ಲಷ್ಕರ್ ಇ ತೋಯ್ಬಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಪಾತ್ರವಿದೆ ಎಂದು ಭಾರತ ಹೇಳುತ್ತಲೇ ಬಂದಿದ್ದರೂ, ಪಾಕಿಸ್ತಾನ ಆತನನ್ನು ಸ್ವಚ್ಛಂದವಾಗಿ ತಿರುಗಲು ಅವಕಾಶ ನೀಡಿದೆ.

ಇದನ್ನು ಮಾತುಕತೆ ಸಂದರ್ಭದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಹೇಳಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗದ ಕಟಕಟೆಗೆ ತರುವಂತೆ ಭಾರತ ಹೇಳಿದೆ ಎಂದು ಮೂಲಗಳು ಹೇಳಿವೆ.

ಸಯೀದ್ ಕಳೆದ ಕೆಲವು ಸಮಯಗಳಿಂದ ಪಾಕಿಸ್ತಾನದ ಭಯೋತ್ಪಾದಕರನ್ನು ಒಟ್ಟು ಹಾಕಿಕೊಂಡು ಭಾರತದ ವಿರುದ್ಧ ಜಿಹಾದ್ ನಡೆಸುವಂತೆ ಪ್ರೋತ್ಸಾಹಿಸುತ್ತಿದ್ದಾನೆ.

No comments: