VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 11, 2010

ತಮಿಳುನಾಡು ವರದಿ- ರಾಜೀವ್ ಹಂತಕಿ ನಳಿನಿ ಬಿಡುಗಡೆ ?

ಚೆನ್ನೈ, ಗುರುವಾರ, 11 ಮಾರ್ಚ್ ೨೦೧೦.ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ಳನ್ನು ಅವಧಿಗೆ ಮುಂಚೆ ಬಿಡುಗಡೆ ಮಾಡುವ ಅರ್ಜಿಯ ಸಂಬಂಧ ಇಂದು ಮದ್ರಾಸ್ ಹೈಕೋರ್ಟ್ ಅಂತಿಮ ನಿರ್ಧಾರಕ್ಕೆ ಬರಲಿದೆ.ಕಾರಾಗೃಹ ಸಲಹಾ ಸಮಿತಿಯು ಸಿದ್ಧಪಡಿಸಿದ ವರದಿಯನ್ನು ತಮಿಳುನಾಡು ಸರಕಾರ ಇಂದು ನ್ಯಾಯಾಲಯದಲ್ಲಿ ಸಲ್ಲಿಸಲಿದ್ದು, ನ್ಯಾಯಮೂರ್ತಿ ಎಲಿಪ್ ಧರ್ಮರಾವ್ ಮತ್ತು ಕೆ.ಕೆ. ಶಶಿಧರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಕುರಿತ ನಿರ್ಧಾರವನ್ನು ತೆಗೆದುಕೊಳ್ಳಲಿದೆ.ವರದಿಯನ್ನು ಸ್ವೀಕರಿಸಿದ್ದ ರಾಜ್ಯ ಸರಕಾರ, ತನಗೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ಸಲ್ಲಿಸಿದ್ದ ಕೋರಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿದ್ದು, ಇಂದು ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದೆ.19 ವರ್ಷಗಳ ಜೈಲು ಶಿಕ್ಷೆ ಅನುಭವಿಸಿರುವ ನಳಿನಿ ಹೈಕೋರ್ಟ್ ಮೊರೆ ಹೋಗಿದ್ದ ಹಿನ್ನೆಲೆಯಲ್ಲಿ ಇದರ ಆದೇಶವನ್ನು ಪಾಲಿಸಿದ್ದ ರಾಜ್ಯ ಸರಕಾರ ವೆಲ್ಲೋರ್ ಜಿಲ್ಲಾಧಿಕಾರಿ ಮುಖ್ಯಸ್ಥರಾಗಿರುವ ಈ ಕಾರಾಗೃಹ ಸಲಹಾ ಸಮಿತಿಯನ್ನು ರಚಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.ಮೂಲಗಳ ಪ್ರಕಾರ ಸಲಹಾ ಸಮಿತಿಯು ನಳಿನಿಯನ್ನು ಅವಧಿಗಿಂತ ಮುಂಚೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದ್ದು, ಈ ಹಿಂದೆ ಬಿಡುಗಡೆಯನ್ನು ವಿರೋಧಿಸಿದ್ದ ರಾಜ್ಯ ಸರಕಾರ ಇದೀಗ ಪರವಾಗಿರುವುದು ಸ್ಪಷ್ಟವಾಗಿದೆ ಎಂದು ಹೇಳಲಾಗಿದೆ.ಅದೇ ಹೊತ್ತಿಗೆ ಕರುಣಾನಿಧಿ ಸರಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಕೇಂದ್ರವನ್ನು ಸಂಪರ್ಕಿಸದೆ ಏಕಾಏಕಿ ನಿರ್ಧಾರವನ್ನು ತಾನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ.ರಾಜೀವ್ ಗಾಂಧಿ ಹತ್ಯೆಯಲ್ಲಿ ಪ್ರಮುಖ ಪಾತ್ರವಹಿಸಿರುವ ಎಲ್‌ಟಿಟಿಇ ನಾಯಕ ಮುರುಗನ್ ಪತ್ನಿ ನಳಿನಿ, ಶ್ರೀಪೆರಂಬೂರಿನಲ್ಲಿ ಹತ್ಯಾಕೋರರ ಜತೆ ಸೇರಿಕೊಂಡಿದ್ದಳು.

No comments: