VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 17, 2010

ಸಿಡಿ ಪರಿಶೀಲಿಸಿ ಮುತಾಲಿಕ್ ವಿರುದ್ಧ ಕ್ರಮ: ಗೃಹ ಸಚಿವ ಡಾ.ಆಚಾರ್ಯ


ಉಡುಪಿ, ಮೇ16: ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗಲಭೆ ನಡೆಸಲು ಹಣ ಪಡೆದಿರುವ ಕುರಿತು ಚಿತ್ರೀಕರಿಸಲಾದ ಸಿಡಿಯ ನಕಲನ್ನು ನಮಗೆ ಒದಗಿಸಿದರೆ, ಅದನ್ನು ಪರಿಶೀಲಿಸಿ ತನಿಖೆ ನಡೆಸಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.
ಉಡುಪಿಯಲ್ಲಿಂದು ಅವರು ಸುದ್ದಿಗಾರರ ಜೊತೆ ಮಾತನಾಡಿದರು. ರೆಡ್ಡಿ ಸಹೋದರರು ಹಾಗೂ ರಾಜ್ಯಪಾಲರ ನಡುವಿನ ಬಿಕ್ಕಟ್ಟಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜಕೀಯದಲ್ಲಿ ಇವೆಲ್ಲ ಸಾಮಾನ್ಯ. ಅದಕ್ಕೆಲ್ಲ ಪರಿಹಾರ ಇದ್ದೇ ಇದೆ. ಯಾವುದೇ ಸಂದರ್ಭದಲ್ಲೂ ಬಿಕ್ಕಟ್ಟುಗಳನ್ನು ಎದುರಿಸುವ ಶಕ್ತಿ ನಮ್ಮ ಸರಕಾರಕ್ಕೆ ಇದೆ. ಅವುಗಳನ್ನು ನಿಭಾಯಿಸಿ ಮೂರು ವರ್ಷ ರಾಜ್ಯಭಾರ ಮಾಡುತ್ತೇವೆ ಎಂದರು.

No comments: