VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 30, 2010

ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ, ಕೇಂದ್ರಕ್ಕೆ ಮನವಿ

ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆದ ತುಳು ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡಿದ್ದ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಆಚಾರ್ಯ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಿ ಭಾಷೆಗೆ ಸಾಂವಿಧಾನಿಕ ಮಾನ್ಯತೆ ಒದಗಿಸಿಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಆಚಾರ್ಯ ಭರವಸೆ ನೀಡಿದರು.

ಇದೇ ವೇಳೆ ಮಂಗಳೂರಿನಲ್ಲಿ ನಿರ್ಮಾಣಗೊಳ್ಳಲಿರುವ ತುಳು ಭವನಕ್ಕೆ ಅಗತ್ಯ ಹಣಕಾಸು ನೆರವು ನೀಡಲಾಗುತ್ತದೆ. ಧರ್ಮಸ್ಥಳದಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ನಿರ್ಣಯಗಳನ್ನು ಜಾರಿಗೆ ತರಲು ಸರ್ಕಾರ ಎಲ್ಲ ರೀತಿಯಿಂದಲೂ ಸರ್ವ ಸನ್ನದ್ಧವಾಗಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಈಗಾಗಲೇ ತುಳು ಭಾಷೆಯನ್ನು ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಐಚ್ಛಿಕ ವಿಷಯವನ್ನಾಗಿ ಮಾಡಲಾಗಿದೆ. ಪಠ್ಯಪುಸ್ತಕ ಮುದ್ರಣ ಕಾರ್ಯವೂ ಈಗಾಗಲೇ ಭರದಿಂದ ಸಾಗಿದ್ದು, ಆದಷ್ಟು ಬೇಗ ಇದು ವಿದ್ಯಾರ್ಥಿಗಳ ಕೈಗೆ ಸಿಗಲಿದೆ ಎಂದರು.

ಇಂಗ್ಲೀಷ್ ಮತ್ತು ಅನ್ಯ ಭಾಷೆಯ ಪ್ರಭಾವದಿಂದ ನಮಗೆ ತಿಳಿಯದಂತೆಯೇ ನಮ್ಮ ಸಾಂಸ್ಕೃತಿಕ ವೈವಿಧ್ಯತೆಗೆ ಧಕ್ಕೆಯಾಗುತ್ತಿದೆ. ಭಾಷಾ ಪ್ರೇಮದಿಂದ ಮಾತ್ರ ಕನ್ನಡ ಅಥವಾ ತುಳು ಭಾಷೆ ಉಳಿಯಬಲ್ಲುದು ಎಂದು ಅವರು ತಿಳಿಸಿದರು.

No comments: